2. ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.
|
3. ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
|
4. ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
|
7. ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ.
|
8. ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
|
9. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
|
11. ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ.
|
12. ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
|
13. ಮಾರಿ ದವನು ಇನ್ನೂ ಬದುಕಿದ್ದರೂ ಮಾರಿದ್ದರ ಬಳಿಗೆ ಹಿಂತಿರುಗುವದಿಲ್ಲ; ದರ್ಶನವು ತಿರುಗದ ಸಮಸ್ತ ಜನಸಮೂಹದ ವಿಷಯವಾಗಿದೆ. ಒಬ್ಬರೂ ತಮ್ಮ ಜೀವದ ಅಕ್ರಮದಲ್ಲಿ ಬಲಗೊಳ್ಳುವದಿಲ್ಲ.
|
14. ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧಮಾಡಿಕೊಂಡಿದ್ದಾರೆ, ಆದರೆ ಯಾರೂ ಯುದ್ಧಕ್ಕೆ ಹೋಗುವದಿಲ್ಲ; ಯಾಕಂದರೆ ಎಲ್ಲಾ ಜನ ಸಮೂಹದ ಮೇಲೆ ನನ್ನ ಕೋಪವಿದೆ.
|
15. ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
|
16. ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
|
18. ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
|
19. ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
|
20. ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
|
21. ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು.
|
22. ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
|
24. ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
|
26. ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
|
27. ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
|