1. ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
|
3. ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
|
4. ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ.
|
6. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
|
7. ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
|
8. ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
|
9. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
|
10. ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
|
11. ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
|
12. ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
|
13. ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
|
15. ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
|
16. ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
|
17. ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
|
19. ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
|
20. ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
|
21. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
|
22. ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
|
23. ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
|
24. ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
|
26. ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
|
27. ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
|
28. ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
|
29. ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;
|