6. ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.
|
8. ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
|
9. ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
|
10. ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.
|
11. ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
|
15. ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
|
16. ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
|
17. ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
|
18. ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
|
19. ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
|
20. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.
|
22. ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
|
23. ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
|
24. ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
|
25. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
|