1. ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
|
5. ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
|
7. (ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--
|
8. ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
|
9. ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
|
10. ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.
|
11. ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
|
12. ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ
|
14. ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
|
15. ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
|
17. ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
|
18. ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
|
19. ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
|
21. ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
|
23. ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
|
26. ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
|
28. ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?
|
29. ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ--
|
31. ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
|
32. ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
|
35. ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
|