1. ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
|
2. ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
|
3. ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
|
4. ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
|
5. ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
|
6. ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
|
7. ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
|
8. ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
|
9. ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
|
10. ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
|
12. ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು.
|
13. ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.
|
14. ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.
|
15. ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.
|
16. ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
|
17. ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು
|
19. ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
|
20. ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.
|
22. ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
|
23. ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು.
|
24. ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
|
25. ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
|
26. ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
|