2. ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
|
4. ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
|
6. ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
|
7. ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.
|
8. ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
|
10. ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
|
11. ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ
|
13. ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
|
14. ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
|
15. ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
|
17. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
|
20. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
|
21. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
|
22. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
|
24. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
|
27. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
|
29. ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
|
30. ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
|
32. ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
|
35. ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
|
36. ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
|
38. ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
|
39. ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
|
41. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
|
42. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
|
43. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
|
46. ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
|
47. ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
|
49. ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,
|
50. ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
|
51. ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.
|
52. ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
|