1. ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ.
|
3. ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು.
|
7. ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
|
8. ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
|
10. ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.
|
11. ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
|
12. ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.
|
14. ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
|
15. ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು.
|
16. ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
|
17. ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
|
18. ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
|
19. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
|
20. ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
|
21. ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
|
22. ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
|
23. ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
|
24. ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
|
25. ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು?ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
|
26. ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
|