1. ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
|
2. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.
|
4. ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.
|
7. ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು.
|
12. ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ--
|
14. ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
|
15. ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
|
16. ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು.
|
20. ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
|
21. ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
|
24. ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
|
27. ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು.
|
29. ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
|
31. ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
|
32. ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
|
34. ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
|
36. ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
|
39. ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
|
40. ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
|
41. (ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
|
43. ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
|
44. ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು.
|
46. ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.
|