1. ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
|
2. ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
|
6. ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
|
7. ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
|
8. ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
|
9. ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
|
10. ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
|
11. ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
|
13. ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
|
16. ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
|
17. ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
|
18. ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
|
20. ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
|
24. ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
|