1. ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.
|
2. ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
|
4. ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
|
5. ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
|
6. ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.
|
7. ಆತನು ನಾಲ್ಕನೆಯ ಮುದ್ರೆಯನ್ನು ತೆರೆ ದಾಗ--ಬಂದು ನೋಡು ಎಂದು ನಾಲ್ಕನೆಯ ಜೀವಿಯು ಹೇಳುವ ಧ್ವನಿಯನ್ನು ನಾನು ಕೇಳಿದೆನು.
|
8. ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
|
9. ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
|
10. ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
|
11. ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
|
12. ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
|
13. ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
|
14. ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
|
15. ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
|
16. ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;
|