1. ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--
|
2. ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
|
3. ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
|
4. ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ.
|
5. ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
|
6. ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ.
|
7. ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
|
10. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
|
11. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
|
13. ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
|
14. ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
|
16. ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
|
18. ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
|
20. ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
|
22. ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
|
23. ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
|
24. ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
|
26. ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
|
27. ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
|
29. ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
|
31. ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
|
32. ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
|