1. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ
|
3. ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.
|
4. ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
|
5. ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
|
8. ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
|
10. ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
|
11. ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ
|
13. ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
|
14. ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
|
15. ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
|
16. ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
|
17. ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
|
18. ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
|
20. ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
|
21. ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
|
22. ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆ
|
23. ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
|