2. ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
|
3. ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ
|
4. ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
|
5. ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.
|
6. ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;
|
7. ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
|
8. ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
|
10. ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
|
11. ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
|
12. ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--
|
13. ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
|
14. ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
|
15. ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
|
16. ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
|
17. ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
|
18. ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,
|
19. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
|