3. ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
|
4. ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು
|
5. ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
|
6. ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು.
|
8. ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ
|
10. ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
|
14. ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ.
|
15. ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
|
20. ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
|
23. ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ
|
24. ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
|
25. ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
|
26. ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
|
28. ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.
|
29. ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
|
30. ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
|
31. ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
|
35. ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
|
36. ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
|
38. ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.
|
39. ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
|
40. ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
|
41. ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
|