1. ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.
|
2. ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
|
3. ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.
|
5. ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
|
7. ಇದಲ್ಲದೆ ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ ಅದಕ್ಕೆ ದೇವದರ್ಶನ ಗುಡಾರ ಎಂದು ಹೆಸರಿಟ್ಟನು. ತರುವಾಯ ಕರ್ತನನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನ ಗುಡಾರಕ್ಕೆ ಹೋದರು.
|
8. ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.
|
9. ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.
|
10. ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು.
|
11. ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.
|
12. ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
|
13. ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.
|
16. ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
|
17. ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
|
19. ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
|
22. ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
|
23. ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
|