2. ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.
|
3. ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
|
8. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
|
9. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
|
10. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
|
12. ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
|
15. ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
|
16. ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
|
17. ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
|
19. ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
|
22. ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
|
25. ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
|
26. ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
|
27. ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
|
28. ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
|
29. ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
|
30. ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
|