1. ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
|
2. ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
|
3. ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
|
4. ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
|
5. ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
|
6. ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
|
7. ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
|
8. ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
|
10. ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
|
12. ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
|
14. ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
|
16. ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
|
17. ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
|
18. ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
|