2. (ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
|
3. ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
|
4. ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
|
8. ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
|
9. ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.
|
10. ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು.
|
11. ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.
|
13. ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು.
|
15. ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
|
20. ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು.
|
22. ಆದರೆ ಈಗಲೂ ಸಹ ನೀನು ದೇವರಿಂದ ಏನು ಕೇಳಿಕೊಳ್ಳುತ್ತೀಯೋ ದೇವರು ಅದನ್ನು ನಿನಗೆ ಕೊಡುವನೆಂದು ನಾನು ಬಲ್ಲೆನು ಅಂದಳು.
|
24. ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.
|
26. ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
|
27. ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
|
28. ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
|
31. ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು.
|
32. ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
|
33. ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
|
38. ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
|
39. ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
|
41. ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
|
42. ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
|
44. ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
|
47. ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
|
48. ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
|
50. ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
|
51. ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
|
54. ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
|
55. ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
|
56. ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
|
57. ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
|