1. ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
|
3. ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
|
4. ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
|
7. ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
|
8. ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
|
12. ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
|
17. ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
|
18. ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
|
19. ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
|
22. ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
|
23. ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
|
26. ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
|
27. ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.
|
28. ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
|
29. ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
|
30. ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
|
31. ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
|
32. ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
|
33. ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
|
35. ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
|
36. ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
|
37. ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
|
38. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
|
39. (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
|
42. ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
|
45. ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
|
51. ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
|
52. ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
|