1. ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
|
2. ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
|
3. ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
|
4. ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
|
5. ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
|
8. ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
|
9. ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
|
10. ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.
|
11. ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
|
12. ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.
|
13. ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
|
14. ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
|
15. ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.
|
16. ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;
|
17. ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
|
19. ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
|
20. ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
|
21. ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.
|
22. ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
|
25. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
|
28. ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
|
29. ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
|
30. ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
|
31. ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ.
|
32. ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
|
33. ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
|
34. ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
|
35. ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
|
37. ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.
|
38. ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
|