ಙ್ಞಾನೋಕ್ತಿಗಳು 16 : 1 (KNV)
ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
ಙ್ಞಾನೋಕ್ತಿಗಳು 16 : 2 (KNV)
ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
ಙ್ಞಾನೋಕ್ತಿಗಳು 16 : 3 (KNV)
ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.
ಙ್ಞಾನೋಕ್ತಿಗಳು 16 : 4 (KNV)
ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
ಙ್ಞಾನೋಕ್ತಿಗಳು 16 : 5 (KNV)
ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
ಙ್ಞಾನೋಕ್ತಿಗಳು 16 : 6 (KNV)
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ಙ್ಞಾನೋಕ್ತಿಗಳು 16 : 7 (KNV)
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ಙ್ಞಾನೋಕ್ತಿಗಳು 16 : 8 (KNV)
ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
ಙ್ಞಾನೋಕ್ತಿಗಳು 16 : 9 (KNV)
ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
ಙ್ಞಾನೋಕ್ತಿಗಳು 16 : 10 (KNV)
ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ.
ಙ್ಞಾನೋಕ್ತಿಗಳು 16 : 11 (KNV)
ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
ಙ್ಞಾನೋಕ್ತಿಗಳು 16 : 12 (KNV)
ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
ಙ್ಞಾನೋಕ್ತಿಗಳು 16 : 13 (KNV)
ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.
ಙ್ಞಾನೋಕ್ತಿಗಳು 16 : 14 (KNV)
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
ಙ್ಞಾನೋಕ್ತಿಗಳು 16 : 15 (KNV)
ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
ಙ್ಞಾನೋಕ್ತಿಗಳು 16 : 16 (KNV)
ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
ಙ್ಞಾನೋಕ್ತಿಗಳು 16 : 17 (KNV)
ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
ಙ್ಞಾನೋಕ್ತಿಗಳು 16 : 18 (KNV)
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಙ್ಞಾನೋಕ್ತಿಗಳು 16 : 19 (KNV)
ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
ಙ್ಞಾನೋಕ್ತಿಗಳು 16 : 20 (KNV)
ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.
ಙ್ಞಾನೋಕ್ತಿಗಳು 16 : 21 (KNV)
ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
ಙ್ಞಾನೋಕ್ತಿಗಳು 16 : 22 (KNV)
ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.
ಙ್ಞಾನೋಕ್ತಿಗಳು 16 : 23 (KNV)
ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
ಙ್ಞಾನೋಕ್ತಿಗಳು 16 : 24 (KNV)
ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
ಙ್ಞಾನೋಕ್ತಿಗಳು 16 : 25 (KNV)
ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
ಙ್ಞಾನೋಕ್ತಿಗಳು 16 : 26 (KNV)
ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
ಙ್ಞಾನೋಕ್ತಿಗಳು 16 : 27 (KNV)
ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
ಙ್ಞಾನೋಕ್ತಿಗಳು 16 : 28 (KNV)
ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
ಙ್ಞಾನೋಕ್ತಿಗಳು 16 : 29 (KNV)
ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
ಙ್ಞಾನೋಕ್ತಿಗಳು 16 : 30 (KNV)
ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
ಙ್ಞಾನೋಕ್ತಿಗಳು 16 : 31 (KNV)
ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
ಙ್ಞಾನೋಕ್ತಿಗಳು 16 : 32 (KNV)
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
ಙ್ಞಾನೋಕ್ತಿಗಳು 16 : 33 (KNV)
ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: