ಙ್ಞಾನೋಕ್ತಿಗಳು 22 : 1 (KNV)
ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
ಙ್ಞಾನೋಕ್ತಿಗಳು 22 : 2 (KNV)
ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
ಙ್ಞಾನೋಕ್ತಿಗಳು 22 : 3 (KNV)
ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
ಙ್ಞಾನೋಕ್ತಿಗಳು 22 : 4 (KNV)
ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
ಙ್ಞಾನೋಕ್ತಿಗಳು 22 : 5 (KNV)
ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
ಙ್ಞಾನೋಕ್ತಿಗಳು 22 : 6 (KNV)
ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
ಙ್ಞಾನೋಕ್ತಿಗಳು 22 : 7 (KNV)
ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು.
ಙ್ಞಾನೋಕ್ತಿಗಳು 22 : 8 (KNV)
ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
ಙ್ಞಾನೋಕ್ತಿಗಳು 22 : 9 (KNV)
ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
ಙ್ಞಾನೋಕ್ತಿಗಳು 22 : 10 (KNV)
ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
ಙ್ಞಾನೋಕ್ತಿಗಳು 22 : 11 (KNV)
ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.
ಙ್ಞಾನೋಕ್ತಿಗಳು 22 : 12 (KNV)
ಕರ್ತನ ಕಣ್ಣುಗಳು ತಿಳುವಳಿಕೆಯನ್ನು ಕಾಪಾಡುತ್ತವೆ; ಆತನು ದೋಷಿಯ ಮಾತುಗಳನ್ನು ಕೆಡವಿಹಾಕುತ್ತಾನೆ.
ಙ್ಞಾನೋಕ್ತಿಗಳು 22 : 13 (KNV)
ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
ಙ್ಞಾನೋಕ್ತಿಗಳು 22 : 14 (KNV)
ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.
ಙ್ಞಾನೋಕ್ತಿಗಳು 22 : 15 (KNV)
ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
ಙ್ಞಾನೋಕ್ತಿಗಳು 22 : 16 (KNV)
ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
ಙ್ಞಾನೋಕ್ತಿಗಳು 22 : 17 (KNV)
ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
ಙ್ಞಾನೋಕ್ತಿಗಳು 22 : 18 (KNV)
ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
ಙ್ಞಾನೋಕ್ತಿಗಳು 22 : 19 (KNV)
ನಿನ್ನ ಭರವಸವು ಕರ್ತನಲ್ಲಿ ಇರುವಂತೆ ನಿನಗೆ ಈ ದಿವಸ ತಿಳಿಯ ಪಡಿಸಿದ್ದೇನೆ.
ಙ್ಞಾನೋಕ್ತಿಗಳು 22 : 20 (KNV)
ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ
ಙ್ಞಾನೋಕ್ತಿಗಳು 22 : 21 (KNV)
ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?
ಙ್ಞಾನೋಕ್ತಿಗಳು 22 : 22 (KNV)
ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
ಙ್ಞಾನೋಕ್ತಿಗಳು 22 : 23 (KNV)
ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
ಙ್ಞಾನೋಕ್ತಿಗಳು 22 : 24 (KNV)
ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
ಙ್ಞಾನೋಕ್ತಿಗಳು 22 : 25 (KNV)
ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.
ಙ್ಞಾನೋಕ್ತಿಗಳು 22 : 26 (KNV)
ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.
ಙ್ಞಾನೋಕ್ತಿಗಳು 22 : 27 (KNV)
ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
ಙ್ಞಾನೋಕ್ತಿಗಳು 22 : 28 (KNV)
ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
ಙ್ಞಾನೋಕ್ತಿಗಳು 22 : 29 (KNV)
ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: