ಪ್ರಸಂಗಿ 7 : 1 (KNV)
ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.
ಪ್ರಸಂಗಿ 7 : 2 (KNV)
ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
ಪ್ರಸಂಗಿ 7 : 3 (KNV)
ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
ಪ್ರಸಂಗಿ 7 : 4 (KNV)
ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.
ಪ್ರಸಂಗಿ 7 : 5 (KNV)
ಮೂಢರ ಹಾಡನ್ನು ಒಬ್ಬ ಮನುಷ್ಯನು ಕೇಳುವದಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.
ಪ್ರಸಂಗಿ 7 : 6 (KNV)
ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
ಪ್ರಸಂಗಿ 7 : 7 (KNV)
ಖಂಡಿತವಾಗಿಯೂ ಬಲಾತ್ಕಾರವು ಜ್ಞಾನಿಯನ್ನು ಹುಚ್ಚನನ್ನಾಗಿ ಮಾಡುತ್ತದೆ; ಲಂಚವು ಹೃದಯವನ್ನು ನಾಶಮಾಡುತ್ತದೆ.
ಪ್ರಸಂಗಿ 7 : 8 (KNV)
ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
ಪ್ರಸಂಗಿ 7 : 9 (KNV)
ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
ಪ್ರಸಂಗಿ 7 : 10 (KNV)
ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.
ಪ್ರಸಂಗಿ 7 : 11 (KNV)
ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
ಪ್ರಸಂಗಿ 7 : 12 (KNV)
ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
ಪ್ರಸಂಗಿ 7 : 13 (KNV)
ದೇವರ ಕಾರ್ಯವನ್ನು ಯೋಚಿಸು; ಆತನು ಡೊಂಕು ಮಾಡಿದ್ದನ್ನು ಯಾವನು ನೆಟ್ಟಗೆ ಮಾಡಲು ಶಕ್ತನು.
ಪ್ರಸಂಗಿ 7 : 14 (KNV)
ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.
ಪ್ರಸಂಗಿ 7 : 15 (KNV)
ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
ಪ್ರಸಂಗಿ 7 : 16 (KNV)
ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?
ಪ್ರಸಂಗಿ 7 : 17 (KNV)
ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
ಪ್ರಸಂಗಿ 7 : 18 (KNV)
ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
ಪ್ರಸಂಗಿ 7 : 19 (KNV)
ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
ಪ್ರಸಂಗಿ 7 : 20 (KNV)
ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
ಪ್ರಸಂಗಿ 7 : 21 (KNV)
ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ;
ಪ್ರಸಂಗಿ 7 : 22 (KNV)
ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ;
ಪ್ರಸಂಗಿ 7 : 23 (KNV)
ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.
ಪ್ರಸಂಗಿ 7 : 24 (KNV)
ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?
ಪ್ರಸಂಗಿ 7 : 25 (KNV)
ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
ಪ್ರಸಂಗಿ 7 : 26 (KNV)
ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
ಪ್ರಸಂಗಿ 7 : 27 (KNV)
ಇಗೋ, ಲೆಕ್ಕವನ್ನು ಕಂಡುಹಿಡಿಯಲು ಒಂದೊಂದನ್ನಾಗಿ ಎಣಿಸಿ ನಾನು ಇದನ್ನು ಕಂಡುಕೊಂಡೆ ನೆಂದು ಪ್ರಸಂಗಿ ಹೇಳುತ್ತಾನೆ:
ಪ್ರಸಂಗಿ 7 : 28 (KNV)
ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ.ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
ಪ್ರಸಂಗಿ 7 : 29 (KNV)
ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: