ದಾನಿಯೇಲನು 5 : 1 (KNV)
ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
ದಾನಿಯೇಲನು 5 : 2 (KNV)
ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.
ದಾನಿಯೇಲನು 5 : 3 (KNV)
ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
ದಾನಿಯೇಲನು 5 : 4 (KNV)
ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
ದಾನಿಯೇಲನು 5 : 5 (KNV)
ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
ದಾನಿಯೇಲನು 5 : 6 (KNV)
ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
ದಾನಿಯೇಲನು 5 : 7 (KNV)
ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
ದಾನಿಯೇಲನು 5 : 8 (KNV)
ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
ದಾನಿಯೇಲನು 5 : 9 (KNV)
ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು.
ದಾನಿಯೇಲನು 5 : 10 (KNV)
ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
ದಾನಿಯೇಲನು 5 : 11 (KNV)
ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
ದಾನಿಯೇಲನು 5 : 12 (KNV)
ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
ದಾನಿಯೇಲನು 5 : 13 (KNV)
ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
ದಾನಿಯೇಲನು 5 : 14 (KNV)
ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
ದಾನಿಯೇಲನು 5 : 15 (KNV)
ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
ದಾನಿಯೇಲನು 5 : 16 (KNV)
ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
ದಾನಿಯೇಲನು 5 : 17 (KNV)
ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.
ದಾನಿಯೇಲನು 5 : 18 (KNV)
ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
ದಾನಿಯೇಲನು 5 : 19 (KNV)
ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
ದಾನಿಯೇಲನು 5 : 20 (KNV)
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ದಾನಿಯೇಲನು 5 : 21 (KNV)
ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
ದಾನಿಯೇಲನು 5 : 22 (KNV)
ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
ದಾನಿಯೇಲನು 5 : 23 (KNV)
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
ದಾನಿಯೇಲನು 5 : 24 (KNV)
ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.
ದಾನಿಯೇಲನು 5 : 25 (KNV)
ಆ ಬರಹವು ಏನಂದರೆ ಮೆನೇ ಮೆನೇ ತೇಕಲ್‌ ಉಫ ರ್ಸಿನ್‌,
ದಾನಿಯೇಲನು 5 : 26 (KNV)
ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ;
ದಾನಿಯೇಲನು 5 : 27 (KNV)
ತೇಕೆಲ್‌ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.
ದಾನಿಯೇಲನು 5 : 28 (KNV)
ಪೆರೇಸ್‌ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
ದಾನಿಯೇಲನು 5 : 29 (KNV)
ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
ದಾನಿಯೇಲನು 5 : 30 (KNV)
ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
ದಾನಿಯೇಲನು 5 : 31 (KNV)
ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: