ಅಪೊಸ್ತಲರ ಕೃತ್ಯಗ 4 : 1 (KNV)
ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
ಅಪೊಸ್ತಲರ ಕೃತ್ಯಗ 4 : 2 (KNV)
ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
ಅಪೊಸ್ತಲರ ಕೃತ್ಯಗ 4 : 3 (KNV)
ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
ಅಪೊಸ್ತಲರ ಕೃತ್ಯಗ 4 : 4 (KNV)
ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
ಅಪೊಸ್ತಲರ ಕೃತ್ಯಗ 4 : 5 (KNV)
ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
ಅಪೊಸ್ತಲರ ಕೃತ್ಯಗ 4 : 6 (KNV)
ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
ಅಪೊಸ್ತಲರ ಕೃತ್ಯಗ 4 : 7 (KNV)
ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
ಅಪೊಸ್ತಲರ ಕೃತ್ಯಗ 4 : 8 (KNV)
ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
ಅಪೊಸ್ತಲರ ಕೃತ್ಯಗ 4 : 9 (KNV)
ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
ಅಪೊಸ್ತಲರ ಕೃತ್ಯಗ 4 : 10 (KNV)
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ಅಪೊಸ್ತಲರ ಕೃತ್ಯಗ 4 : 11 (KNV)
ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
ಅಪೊಸ್ತಲರ ಕೃತ್ಯಗ 4 : 12 (KNV)
ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 4 : 13 (KNV)
ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
ಅಪೊಸ್ತಲರ ಕೃತ್ಯಗ 4 : 14 (KNV)
ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
ಅಪೊಸ್ತಲರ ಕೃತ್ಯಗ 4 : 15 (KNV)
ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
ಅಪೊಸ್ತಲರ ಕೃತ್ಯಗ 4 : 16 (KNV)
ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
ಅಪೊಸ್ತಲರ ಕೃತ್ಯಗ 4 : 17 (KNV)
ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
ಅಪೊಸ್ತಲರ ಕೃತ್ಯಗ 4 : 18 (KNV)
ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
ಅಪೊಸ್ತಲರ ಕೃತ್ಯಗ 4 : 19 (KNV)
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
ಅಪೊಸ್ತಲರ ಕೃತ್ಯಗ 4 : 20 (KNV)
ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 4 : 21 (KNV)
ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
ಅಪೊಸ್ತಲರ ಕೃತ್ಯಗ 4 : 22 (KNV)
ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
ಅಪೊಸ್ತಲರ ಕೃತ್ಯಗ 4 : 23 (KNV)
ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
ಅಪೊಸ್ತಲರ ಕೃತ್ಯಗ 4 : 24 (KNV)
ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
ಅಪೊಸ್ತಲರ ಕೃತ್ಯಗ 4 : 25 (KNV)
ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
ಅಪೊಸ್ತಲರ ಕೃತ್ಯಗ 4 : 26 (KNV)
ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
ಅಪೊಸ್ತಲರ ಕೃತ್ಯಗ 4 : 27 (KNV)
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು
ಅಪೊಸ್ತಲರ ಕೃತ್ಯಗ 4 : 28 (KNV)
ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
ಅಪೊಸ್ತಲರ ಕೃತ್ಯಗ 4 : 29 (KNV)
ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
ಅಪೊಸ್ತಲರ ಕೃತ್ಯಗ 4 : 30 (KNV)
ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
ಅಪೊಸ್ತಲರ ಕೃತ್ಯಗ 4 : 31 (KNV)
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
ಅಪೊಸ್ತಲರ ಕೃತ್ಯಗ 4 : 32 (KNV)
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
ಅಪೊಸ್ತಲರ ಕೃತ್ಯಗ 4 : 33 (KNV)
ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
ಅಪೊಸ್ತಲರ ಕೃತ್ಯಗ 4 : 34 (KNV)
ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
ಅಪೊಸ್ತಲರ ಕೃತ್ಯಗ 4 : 35 (KNV)
ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.
ಅಪೊಸ್ತಲರ ಕೃತ್ಯಗ 4 : 36 (KNV)
ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
ಅಪೊಸ್ತಲರ ಕೃತ್ಯಗ 4 : 37 (KNV)
ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37

BG:

Opacity:

Color:


Size:


Font: