ಅಪೊಸ್ತಲರ ಕೃತ್ಯಗ 3 : 1 (ERVKN)
{ಪೇತ್ರನಿಂದ ಗುಣಹೊಂದಿದ ಕುಂಟ} [PS] ಒಂದು ದಿನ ಪೇತ್ರ ಮತ್ತು ಯೋಹಾನ ದೇವಾಲಯಕ್ಕೆ ಹೋದರು. ಆಗ ಮಧ್ಯಾಹ್ನ ಮೂರು ಗಂಟೆಯ ಸಮಯವಾಗಿತ್ತು. ಈ ವೇಳೆಯಲ್ಲೇ ಪ್ರತಿದಿನ ಪ್ರಾರ್ಥನಾಕೂಟ ನಡೆಯುತ್ತಿತ್ತು.
ಅಪೊಸ್ತಲರ ಕೃತ್ಯಗ 3 : 2 (ERVKN)
ಅವರು ದೇವಾಲಯಕ್ಕೆ ಹೋಗುತ್ತಿದ್ದಾಗ ಅಲ್ಲೊಬ್ಬ ಹುಟ್ಟುಕುಂಟನಿದ್ದನು. ಅವನಿಗೆ ನಡೆಯಲಾಗುತ್ತಿರಲಿಲ್ಲ. ಆದ್ದರಿಂದ ಅವನ ಕೆಲವು ಸ್ನೇಹಿತರು ಅವನನ್ನು ಪ್ರತಿದಿನ ದೇವಾಲಯಕ್ಕೆ ಹೊತ್ತುಕೊಂಡು ಬಂದು, ದೇವಾಲಯದ ಹೊರ ಬಾಗಿಲುಗಳ ಒಂದರ ಸಮೀಪದಲ್ಲಿ ಕುಳ್ಳಿರಿಸುತ್ತಿದ್ದರು. ಆ ಬಾಗಿಲಿನ ಹೆಸರು “ಸುಂದರ ದ್ವಾರ.” ಅವನು ದೇವಾಲಯಕ್ಕೆ ಹೋಗುವ ಜನರಿಂದ ಭಿಕ್ಷೆ ಬೇಡುತ್ತಿದ್ದನು.
ಅಪೊಸ್ತಲರ ಕೃತ್ಯಗ 3 : 3 (ERVKN)
ಅಂದು ದೇವಾಲಯದೊಳಕ್ಕೆ ಹೋಗುತ್ತಿದ್ದ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಕೇಳಿದನು. [PE][PS]
ಅಪೊಸ್ತಲರ ಕೃತ್ಯಗ 3 : 4 (ERVKN)
ಪೇತ್ರ ಮತ್ತು ಯೋಹಾನ ಆ ಕುಂಟನಿಗೆ, “ನಮ್ಮನ್ನು ನೋಡು!” ಎಂದರು.
ಅಪೊಸ್ತಲರ ಕೃತ್ಯಗ 3 : 5 (ERVKN)
ಅವನು ಅವರನ್ನು ನೋಡಿದನು. ಅವರು ಸ್ವಲ್ಪ ಹಣಕೊಡಬಹುದೆಂದು ಅವನು ಭಾವಿಸಿಕೊಂಡನು.
ಅಪೊಸ್ತಲರ ಕೃತ್ಯಗ 3 : 6 (ERVKN)
ಆದರೆ ಪೇತ್ರನು, “ನನ್ನಲ್ಲಿ ಬೆಳ್ಳಿಬಂಗಾರಗಳಿಲ್ಲ, ಆದರೆ ನನ್ನಲ್ಲಿರುವುದನ್ನು ನಿನಗೆ ಕೊಡಬಲ್ಲೆನು. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದುನಡೆ!” ಎಂದು ಹೇಳಿ, [PE][PS]
ಅಪೊಸ್ತಲರ ಕೃತ್ಯಗ 3 : 7 (ERVKN)
ಆ ಮನುಷ್ಯನ ಕೈಹಿಡಿದು ಎತ್ತಿದನು. ಆ ಕೂಡಲೇ ಅವನ ಕಾಲುಗಳು ಮತ್ತು ಪಾದಗಳು ಬಲಗೊಂಡವು.
ಅಪೊಸ್ತಲರ ಕೃತ್ಯಗ 3 : 8 (ERVKN)
ಅವನು ಜಿಗಿದು, ತನ್ನ ಪಾದಗಳ ಮೇಲೆ ನಿಂತುಕೊಂಡು ನಡೆಯತೊಡಗಿದನು. ಅವನೂ ಅವರೊಂದಿಗೆ ದೇವಾಲಯಕ್ಕೆ ಹೋದನು. ಅವನು ನಡೆಯುತ್ತಾ ಜಿಗಿಯುತ್ತಾ ದೇವರನ್ನು ಕೊಂಡಾಡುತ್ತಿದ್ದನು.
ಅಪೊಸ್ತಲರ ಕೃತ್ಯಗ 3 : 9 (ERVKN)
(9-10) ಜನರೆಲ್ಲರೂ ಅವನನ್ನು ಗುರುತಿಸಿದರು. ಸುಂದರ ದ್ವಾರದ ಬಳಿಯಲ್ಲಿ ಯಾವಾಗಲೂ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಕುಂಟನೇ ಇವನೆಂದು ಜನರಿಗೆ ತಿಳಿದಿತ್ತು. ಈಗ ಅದೇ ವ್ಯಕ್ತಿಯು ನಡೆಯುತ್ತಾ ದೇವರನ್ನು ಕೊಂಡಾಡುತ್ತಿರುವುದನ್ನು ಕಂಡು ಅವರು ಆಶ್ಚರ್ಯಗೊಂಡು ಬೆರಗಾದರು. [PS]
ಅಪೊಸ್ತಲರ ಕೃತ್ಯಗ 3 : 10 (ERVKN)
ಅಪೊಸ್ತಲರ ಕೃತ್ಯಗ 3 : 11 (ERVKN)
{ಜನರಿಗೆ ಪೇತ್ರನ ವಿವರಣೆ} [PS] ಆ ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು. [PE][PS]
ಅಪೊಸ್ತಲರ ಕೃತ್ಯಗ 3 : 12 (ERVKN)
ಆಗ ಪೇತ್ರನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ಇದನ್ನು ಕಂಡು ನೀವು ಯಾಕೆ ಆಶ್ಚರ್ಯಗೊಂಡಿರುವಿರಿ? ಈ ಮನುಷ್ಯನನ್ನು ನಡೆಯುವಂತೆ ಮಾಡಿದ್ದು ನಮ್ಮ ಶಕ್ತಿಯೆಂದು ನೀವು ನಮ್ಮನ್ನು ನೋಡುತ್ತಿರುವಿರಾ? ನಾವು ಒಳ್ಳೆಯವರಾಗಿರುವುದರಿಂದ ಈ ಕಾರ್ಯವಾಯಿತೆಂದು ಭಾವಿಸಿಕೊಂಡಿದ್ದೀರಾ?
ಅಪೊಸ್ತಲರ ಕೃತ್ಯಗ 3 : 13 (ERVKN)
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ [*ಅಬ್ರಹಾಮ, ಇಸಾಕ, ಯಾಕೋಬ ಹಳೆ ಒಡಂಬಡಿಕೆಯ ಕಾಲದ ಅತ್ಯಂತ ಪ್ರಮುಖ ಯೆಹೂದ್ಯನಾಯಕರು.] ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.
ಅಪೊಸ್ತಲರ ಕೃತ್ಯಗ 3 : 14 (ERVKN)
ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು [†ಕೊಲೆಗಾರ ಬರಬ್ಬ ನೋಡಿರಿ: ಲೂಕ 23:18.] ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.
ಅಪೊಸ್ತಲರ ಕೃತ್ಯಗ 3 : 15 (ERVKN)
ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ. [PE][PS]
ಅಪೊಸ್ತಲರ ಕೃತ್ಯಗ 3 : 16 (ERVKN)
“ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು. [PE][PS]
ಅಪೊಸ್ತಲರ ಕೃತ್ಯಗ 3 : 17 (ERVKN)
“ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ.
ಅಪೊಸ್ತಲರ ಕೃತ್ಯಗ 3 : 18 (ERVKN)
ಹೀಗಾಗುತ್ತದೆ ಎಂದು ದೇವರು ಮೊದಲೇ ತಿಳಿಸಿದ್ದನು. ಕ್ರಿಸ್ತನು ಶ್ರಮೆ ಅನುಭವಿಸಿ ಸಾಯುವನೆಂದು ದೇವರು ತನ್ನ ಪ್ರವಾದಿಗಳ ಮೂಲಕ ಮೊದಲೇ ತಿಳಿಸಿದ್ದನ್ನು ಹೀಗೆ ನೆರವೇರಿಸಿದ್ದಾನೆ.
ಅಪೊಸ್ತಲರ ಕೃತ್ಯಗ 3 : 19 (ERVKN)
ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.
ಅಪೊಸ್ತಲರ ಕೃತ್ಯಗ 3 : 20 (ERVKN)
ಪ್ರಭುವು ನಿಮಗೆ ಆತ್ಮಿಕ ವಿಶ್ರಾಂತಿಯನ್ನು ಕೊಡುವನು. ಆತನು ಕ್ರಿಸ್ತನನ್ನಾಗಿ ಆರಿಸಿಕೊಂಡ ಯೇಸುವನ್ನು ನಿಮಗೆ ಕೊಡುವನು. [PE][PS]
ಅಪೊಸ್ತಲರ ಕೃತ್ಯಗ 3 : 21 (ERVKN)
“ಆದರೆ ಎಲ್ಲವನ್ನು ಸರಿಪಡಿಸುವ ಕಾಲ ಬರುವ ತನಕ ಯೇಸು ಪರಲೋಕದಲ್ಲೇ ಇರಬೇಕು. ದೇವರು ಬಹುಕಾಲದ ಹಿಂದೆ ತನ್ನ ಪವಿತ್ರ ಪ್ರವಾದಿಗಳ ಸಂದೇಶದ ಮೂಲಕ ಮಾತಾಡಿದಾಗ, ಈ ಕಾಲದ ಬಗ್ಗೆ ಹೇಳಿದನು.
ಅಪೊಸ್ತಲರ ಕೃತ್ಯಗ 3 : 22 (ERVKN)
ಮೋಶೆಯು ಇಂತೆಂದಿದ್ದಾನೆ: ‘ನಿಮ್ಮ ದೇವರಾದ ಪ್ರಭುವು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ನಿಮ್ಮ ಸ್ವಂತ ಜನರ ಮಧ್ಯದಿಂದಲೇ ಆ ಪ್ರವಾದಿ ಬರುವನು. ಆತನು ನನ್ನಂತೆ ಇರುವನು. ಆ ಪ್ರವಾದಿ ಹೇಳುವ ಪ್ರತಿಯೊಂದಕ್ಕೂ ನೀವು ವಿಧೇಯರಾಗಬೇಕು.
ಅಪೊಸ್ತಲರ ಕೃತ್ಯಗ 3 : 23 (ERVKN)
ಆತನಿಗೆ ವಿಧೇಯನಾಗದವನು ದೇವಜನರಿಂದ ಬೇರ್ಪಟ್ಟು ಮರಣ ಹೊಂದುವನು.’ [✡ಉಲ್ಲೇಖನ: ಧರ್ಮೋಪದೇಶ. 18:15,19.] [PE][PS]
ಅಪೊಸ್ತಲರ ಕೃತ್ಯಗ 3 : 24 (ERVKN)
“ಸಮುವೇಲನು ಮತ್ತು ಅವನ ನಂತರದ ಪ್ರವಾದಿಗಳು ಇಂದಿನ ಈ ಕಾಲದ ಬಗ್ಗೆ ಮಾತಾಡಿದರು.
ಅಪೊಸ್ತಲರ ಕೃತ್ಯಗ 3 : 25 (ERVKN)
ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ‘ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು’ [✡ಉಲ್ಲೇಖನ: ಆದಿಕಾಂಡ 22:18; 26:24.] ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 3 : 26 (ERVKN)
ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26

BG:

Opacity:

Color:


Size:


Font: