ಅಪೊಸ್ತಲರ ಕೃತ್ಯಗ 4 : 1 (IRVKN)
{ಅಧಿಕಾರಿಗಳ ಮುಂದೆ ಪೇತ್ರ ಯೋಹಾನರು} [PS] ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
ಅಪೊಸ್ತಲರ ಕೃತ್ಯಗ 4 : 2 (IRVKN)
ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.
ಅಪೊಸ್ತಲರ ಕೃತ್ಯಗ 4 : 3 (IRVKN)
ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
ಅಪೊಸ್ತಲರ ಕೃತ್ಯಗ 4 : 4 (IRVKN)
ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು. [PE][PS]
ಅಪೊಸ್ತಲರ ಕೃತ್ಯಗ 4 : 5 (IRVKN)
ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.
ಅಪೊಸ್ತಲರ ಕೃತ್ಯಗ 4 : 6 (IRVKN)
ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.
ಅಪೊಸ್ತಲರ ಕೃತ್ಯಗ 4 : 7 (IRVKN)
ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,
ಅಪೊಸ್ತಲರ ಕೃತ್ಯಗ 4 : 8 (IRVKN)
ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ,
ಅಪೊಸ್ತಲರ ಕೃತ್ಯಗ 4 : 9 (IRVKN)
ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.
ಅಪೊಸ್ತಲರ ಕೃತ್ಯಗ 4 : 10 (IRVKN)
ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ. [PE][PS]
ಅಪೊಸ್ತಲರ ಕೃತ್ಯಗ 4 : 11 (IRVKN)
“ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.
ಅಪೊಸ್ತಲರ ಕೃತ್ಯಗ 4 : 12 (IRVKN)
ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 4 : 13 (IRVKN)
ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
ಅಪೊಸ್ತಲರ ಕೃತ್ಯಗ 4 : 14 (IRVKN)
ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.
ಅಪೊಸ್ತಲರ ಕೃತ್ಯಗ 4 : 15 (IRVKN)
ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,,
ಅಪೊಸ್ತಲರ ಕೃತ್ಯಗ 4 : 16 (IRVKN)
“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
ಅಪೊಸ್ತಲರ ಕೃತ್ಯಗ 4 : 17 (IRVKN)
ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
ಅಪೊಸ್ತಲರ ಕೃತ್ಯಗ 4 : 18 (IRVKN)
ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.
ಅಪೊಸ್ತಲರ ಕೃತ್ಯಗ 4 : 19 (IRVKN)
ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;
ಅಪೊಸ್ತಲರ ಕೃತ್ಯಗ 4 : 20 (IRVKN)
ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.
ಅಪೊಸ್ತಲರ ಕೃತ್ಯಗ 4 : 21 (IRVKN)
ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
ಅಪೊಸ್ತಲರ ಕೃತ್ಯಗ 4 : 22 (IRVKN)
ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು. [PE][PS]
ಅಪೊಸ್ತಲರ ಕೃತ್ಯಗ 4 : 23 (IRVKN)
ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
ಅಪೊಸ್ತಲರ ಕೃತ್ಯಗ 4 : 24 (IRVKN)
ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
ಅಪೊಸ್ತಲರ ಕೃತ್ಯಗ 4 : 25 (IRVKN)
ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, [QBR] “ ‘ಅನ್ಯಜನಗಳು ಏಕೆ ಆಕ್ರೋಶಗೊಂಡರು? [QBR2] ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು? [QBR]
ಅಪೊಸ್ತಲರ ಕೃತ್ಯಗ 4 : 26 (IRVKN)
ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ [QBR2] ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, [QBR2] ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?
ಅಪೊಸ್ತಲರ ಕೃತ್ಯಗ 4 : 27 (IRVKN)
ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
ಅಪೊಸ್ತಲರ ಕೃತ್ಯಗ 4 : 28 (IRVKN)
ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
ಅಪೊಸ್ತಲರ ಕೃತ್ಯಗ 4 : 29 (IRVKN)
ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ
ಅಪೊಸ್ತಲರ ಕೃತ್ಯಗ 4 : 30 (IRVKN)
ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.
ಅಪೊಸ್ತಲರ ಕೃತ್ಯಗ 4 : 31 (IRVKN)
ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು. [PS]
ಅಪೊಸ್ತಲರ ಕೃತ್ಯಗ 4 : 32 (IRVKN)
{ವಿಶ್ವಾಸಿಗಳು ಒಟ್ಟಾಗಿ ಆಸ್ತಿಯನ್ನು ಅನುಭೋಗಿಸುತ್ತಿದ್ದರು} [PS] ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
ಅಪೊಸ್ತಲರ ಕೃತ್ಯಗ 4 : 33 (IRVKN)
ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
ಅಪೊಸ್ತಲರ ಕೃತ್ಯಗ 4 : 34 (IRVKN)
ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು
ಅಪೊಸ್ತಲರ ಕೃತ್ಯಗ 4 : 35 (IRVKN)
ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು. [PE][PS]
ಅಪೊಸ್ತಲರ ಕೃತ್ಯಗ 4 : 36 (IRVKN)
ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
ಅಪೊಸ್ತಲರ ಕೃತ್ಯಗ 4 : 37 (IRVKN)
ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37

BG:

Opacity:

Color:


Size:


Font: