ಆದಿಕಾಂಡ 9 : 1 (IRVKN)
{ನೋಹನೊಡನೆ ಒಡಂಬಡಿಕೆ} [PS] ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
ಆದಿಕಾಂಡ 9 : 2 (IRVKN)
ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
ಆದಿಕಾಂಡ 9 : 3 (IRVKN)
ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
ಆದಿಕಾಂಡ 9 : 4 (IRVKN)
ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.
ಆದಿಕಾಂಡ 9 : 5 (IRVKN)
ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
ಆದಿಕಾಂಡ 9 : 6 (IRVKN)
ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.
ಆದಿಕಾಂಡ 9 : 7 (IRVKN)
ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು. [PE][PS]
ಆದಿಕಾಂಡ 9 : 8 (IRVKN)
ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ,
ಆದಿಕಾಂಡ 9 : 9 (IRVKN)
“ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು.
ಆದಿಕಾಂಡ 9 : 10 (IRVKN)
ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.
ಆದಿಕಾಂಡ 9 : 11 (IRVKN)
ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು. [PE][PS]
ಆದಿಕಾಂಡ 9 : 12 (IRVKN)
ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.
ಆದಿಕಾಂಡ 9 : 13 (IRVKN)
ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.
ಆದಿಕಾಂಡ 9 : 14 (IRVKN)
ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು.
ಆದಿಕಾಂಡ 9 : 15 (IRVKN)
ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.
ಆದಿಕಾಂಡ 9 : 16 (IRVKN)
ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು. [PE][PS]
ಆದಿಕಾಂಡ 9 : 17 (IRVKN)
ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು. ಶೇಮ್ ಯೆಫೆತರಿಗೆ ಸಿಕ್ಕ ಆಶೀರ್ವಾದ, ಕಾನಾನ್ಯರಿಗೆ ದೊರೆತ ಶಾಪ [PE][PS]
ಆದಿಕಾಂಡ 9 : 18 (IRVKN)
ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.
ಆದಿಕಾಂಡ 9 : 19 (IRVKN)
ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು. [PE][PS]
ಆದಿಕಾಂಡ 9 : 20 (IRVKN)
ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.
ಆದಿಕಾಂಡ 9 : 21 (IRVKN)
ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.
ಆದಿಕಾಂಡ 9 : 22 (IRVKN)
ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.
ಆದಿಕಾಂಡ 9 : 23 (IRVKN)
ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ. [PE][PS]
ಆದಿಕಾಂಡ 9 : 24 (IRVKN)
ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು ಕಿರಿಯ ಮಗನು ಮಾಡಿದ್ದನ್ನು ತಿಳಿದು,
ಆದಿಕಾಂಡ 9 : 25 (IRVKN)
“ಕಾನಾನನು [QBR] ಶಾಪಗ್ರಸ್ತನಾಗಲಿ. [QBR2] ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ” ಎಂದನು. [PE][PS]
ಆದಿಕಾಂಡ 9 : 26 (IRVKN)
ಅವನು ಇನ್ನೂ ನುಡಿದದ್ದೇನೆಂದರೆ, [QBR] “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; [QBR2] ಕಾನಾನನು ಅವರಿಗೆ ದಾಸನಾಗಿರಲಿ. [QBR]
ಆದಿಕಾಂಡ 9 : 27 (IRVKN)
ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, [QBR2] ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, [QBR2] ಕಾನಾನನು ಅವರಿಗೆ ದಾಸನಾಗಿರಲಿ” ಎಂದನು. [PE][PS]
ಆದಿಕಾಂಡ 9 : 28 (IRVKN)
ಪ್ರಳಯವಾದ ಮೇಲೆ ನೋಹನು ಮುನ್ನೂರೈವತ್ತು ವರ್ಷ ಬದುಕಿದನು.
ಆದಿಕಾಂಡ 9 : 29 (IRVKN)
ನೋಹನು ಒಂಭೈನೂರ ಐವತ್ತು ವರ್ಷ ಬದುಕಿ ಸತ್ತನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: