1 ಪೂರ್ವಕಾಲವೃತ್ತಾ 14 : 1 (KNV)
ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
1 ಪೂರ್ವಕಾಲವೃತ್ತಾ 14 : 2 (KNV)
ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು.
1 ಪೂರ್ವಕಾಲವೃತ್ತಾ 14 : 3 (KNV)
ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು.
1 ಪೂರ್ವಕಾಲವೃತ್ತಾ 14 : 4 (KNV)
ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು,
1 ಪೂರ್ವಕಾಲವೃತ್ತಾ 14 : 5 (KNV)
ಸೊಲೊಮೋನನು, ಇಬ್ಹಾರನು, ಎಲೀಷೂವನು, ಎಲ್ಪೆಲೆಟನು,
1 ಪೂರ್ವಕಾಲವೃತ್ತಾ 14 : 6 (KNV)
ನೋಗಹನು, ನೆಫೆ ಗನು,
1 ಪೂರ್ವಕಾಲವೃತ್ತಾ 14 : 7 (KNV)
ಯಾಫೀಯನು, ಎಲೀಷಾಮನು, ಬೆಲ್ಯಾದನು, ಎಲೀಫೆಲೆಟನು.
1 ಪೂರ್ವಕಾಲವೃತ್ತಾ 14 : 8 (KNV)
ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು.
1 ಪೂರ್ವಕಾಲವೃತ್ತಾ 14 : 9 (KNV)
ಆಗ ಫಿಲಿಷ್ಟಿಯರು ಬಂದು ರೆಫಾಯಾಮ್‌ ತಗ್ಗಿನಲ್ಲಿ ಇಳಿದುಕೊಂಡರು.
1 ಪೂರ್ವಕಾಲವೃತ್ತಾ 14 : 10 (KNV)
ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
1 ಪೂರ್ವಕಾಲವೃತ್ತಾ 14 : 11 (KNV)
ಹಾಗೆಯೇ ಅವರು ಬಾಳ್‌ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಆ ಸ್ಥಳಕ್ಕೆ ಬಾಳ್‌ಪೆರಾಚೀಮು ಎಂದು ಹೆಸರಿಟ್ಟನು.
1 ಪೂರ್ವಕಾಲವೃತ್ತಾ 14 : 12 (KNV)
ಫಿಲಿಷ್ಟಿಯರು ತಮ್ಮ ದೇವರು ಗಳನ್ನು ಅಲ್ಲಿ ಬಿಟ್ಟುಬಿಟ್ಟದ್ದರಿಂದ ದಾವೀದನು ಅಪ್ಪಣೆ ಕೊಟ್ಟಾಗ ಬೆಂಕಿಯಿಂದ ಅವು ಸುಡಲ್ಪಟ್ಟವು.
1 ಪೂರ್ವಕಾಲವೃತ್ತಾ 14 : 13 (KNV)
ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು.
1 ಪೂರ್ವಕಾಲವೃತ್ತಾ 14 : 14 (KNV)
ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು.
1 ಪೂರ್ವಕಾಲವೃತ್ತಾ 14 : 15 (KNV)
ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
1 ಪೂರ್ವಕಾಲವೃತ್ತಾ 14 : 16 (KNV)
ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
1 ಪೂರ್ವಕಾಲವೃತ್ತಾ 14 : 17 (KNV)
ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.

1 2 3 4 5 6 7 8 9 10 11 12 13 14 15 16 17

BG:

Opacity:

Color:


Size:


Font: