ಯೆರೆಮಿಯ 39 : 1 (KNV)
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
ಯೆರೆಮಿಯ 39 : 2 (KNV)
ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.
ಯೆರೆಮಿಯ 39 : 3 (KNV)
ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
ಯೆರೆಮಿಯ 39 : 4 (KNV)
ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
ಯೆರೆಮಿಯ 39 : 5 (KNV)
ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
ಯೆರೆಮಿಯ 39 : 6 (KNV)
ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
ಯೆರೆಮಿಯ 39 : 7 (KNV)
ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
ಯೆರೆಮಿಯ 39 : 8 (KNV)
ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
ಯೆರೆಮಿಯ 39 : 9 (KNV)
ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
ಯೆರೆಮಿಯ 39 : 10 (KNV)
ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
ಯೆರೆಮಿಯ 39 : 11 (KNV)
ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್‌ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ
ಯೆರೆಮಿಯ 39 : 12 (KNV)
ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
ಯೆರೆಮಿಯ 39 : 13 (KNV)
ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು
ಯೆರೆಮಿಯ 39 : 14 (KNV)
ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
ಯೆರೆಮಿಯ 39 : 15 (KNV)
ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
ಯೆರೆಮಿಯ 39 : 16 (KNV)
ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.

1 2 3 4 5 6 7 8 9 10 11 12 13 14 15 16

BG:

Opacity:

Color:


Size:


Font: