ಯಾಜಕಕಾಂಡ 4 : 1 (KNV)
ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
ಯಾಜಕಕಾಂಡ 4 : 2 (KNV)
ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
ಯಾಜಕಕಾಂಡ 4 : 3 (KNV)
ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
ಯಾಜಕಕಾಂಡ 4 : 4 (KNV)
ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
ಯಾಜಕಕಾಂಡ 4 : 5 (KNV)
ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.
ಯಾಜಕಕಾಂಡ 4 : 6 (KNV)
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
ಯಾಜಕಕಾಂಡ 4 : 7 (KNV)
ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಯಾಜಕಕಾಂಡ 4 : 8 (KNV)
ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಯಾಜಕಕಾಂಡ 4 : 9 (KNV)
ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.
ಯಾಜಕಕಾಂಡ 4 : 10 (KNV)
ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
ಯಾಜಕಕಾಂಡ 4 : 11 (KNV)
ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ
ಯಾಜಕಕಾಂಡ 4 : 12 (KNV)
ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
ಯಾಜಕಕಾಂಡ 4 : 13 (KNV)
ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
ಯಾಜಕಕಾಂಡ 4 : 14 (KNV)
ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.
ಯಾಜಕಕಾಂಡ 4 : 15 (KNV)
ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು.
ಯಾಜಕಕಾಂಡ 4 : 16 (KNV)
ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು.
ಯಾಜಕಕಾಂಡ 4 : 17 (KNV)
ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.
ಯಾಜಕಕಾಂಡ 4 : 18 (KNV)
ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಯಾಜಕಕಾಂಡ 4 : 19 (KNV)
ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
ಯಾಜಕಕಾಂಡ 4 : 20 (KNV)
ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
ಯಾಜಕಕಾಂಡ 4 : 21 (KNV)
ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
ಯಾಜಕಕಾಂಡ 4 : 22 (KNV)
ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
ಯಾಜಕಕಾಂಡ 4 : 23 (KNV)
ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
ಯಾಜಕಕಾಂಡ 4 : 24 (KNV)
ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
ಯಾಜಕಕಾಂಡ 4 : 25 (KNV)
ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಯಾಜಕಕಾಂಡ 4 : 26 (KNV)
ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಯಾಜಕಕಾಂಡ 4 : 27 (KNV)
ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ
ಯಾಜಕಕಾಂಡ 4 : 28 (KNV)
ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು.
ಯಾಜಕಕಾಂಡ 4 : 29 (KNV)
ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
ಯಾಜಕಕಾಂಡ 4 : 30 (KNV)
ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
ಯಾಜಕಕಾಂಡ 4 : 31 (KNV)
ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಯಾಜಕಕಾಂಡ 4 : 32 (KNV)
ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;
ಯಾಜಕಕಾಂಡ 4 : 33 (KNV)
ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
ಯಾಜಕಕಾಂಡ 4 : 34 (KNV)
ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಯಾಜಕಕಾಂಡ 4 : 35 (KNV)
ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35

BG:

Opacity:

Color:


Size:


Font: