ಙ್ಞಾನೋಕ್ತಿಗಳು 14 : 1 (KNV)
ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
ಙ್ಞಾನೋಕ್ತಿಗಳು 14 : 2 (KNV)
ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.
ಙ್ಞಾನೋಕ್ತಿಗಳು 14 : 3 (KNV)
ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
ಙ್ಞಾನೋಕ್ತಿಗಳು 14 : 4 (KNV)
ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.
ಙ್ಞಾನೋಕ್ತಿಗಳು 14 : 5 (KNV)
ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.
ಙ್ಞಾನೋಕ್ತಿಗಳು 14 : 6 (KNV)
ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
ಙ್ಞಾನೋಕ್ತಿಗಳು 14 : 7 (KNV)
ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.
ಙ್ಞಾನೋಕ್ತಿಗಳು 14 : 8 (KNV)
ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
ಙ್ಞಾನೋಕ್ತಿಗಳು 14 : 9 (KNV)
ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
ಙ್ಞಾನೋಕ್ತಿಗಳು 14 : 10 (KNV)
ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
ಙ್ಞಾನೋಕ್ತಿಗಳು 14 : 11 (KNV)
ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
ಙ್ಞಾನೋಕ್ತಿಗಳು 14 : 12 (KNV)
ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
ಙ್ಞಾನೋಕ್ತಿಗಳು 14 : 13 (KNV)
ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
ಙ್ಞಾನೋಕ್ತಿಗಳು 14 : 14 (KNV)
ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
ಙ್ಞಾನೋಕ್ತಿಗಳು 14 : 15 (KNV)
ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
ಙ್ಞಾನೋಕ್ತಿಗಳು 14 : 16 (KNV)
ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ಙ್ಞಾನೋಕ್ತಿಗಳು 14 : 17 (KNV)
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
ಙ್ಞಾನೋಕ್ತಿಗಳು 14 : 18 (KNV)
ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ.
ಙ್ಞಾನೋಕ್ತಿಗಳು 14 : 19 (KNV)
ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
ಙ್ಞಾನೋಕ್ತಿಗಳು 14 : 20 (KNV)
ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
ಙ್ಞಾನೋಕ್ತಿಗಳು 14 : 21 (KNV)
ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
ಙ್ಞಾನೋಕ್ತಿಗಳು 14 : 22 (KNV)
ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
ಙ್ಞಾನೋಕ್ತಿಗಳು 14 : 23 (KNV)
ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
ಙ್ಞಾನೋಕ್ತಿಗಳು 14 : 24 (KNV)
ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.
ಙ್ಞಾನೋಕ್ತಿಗಳು 14 : 25 (KNV)
ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ.
ಙ್ಞಾನೋಕ್ತಿಗಳು 14 : 26 (KNV)
ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
ಙ್ಞಾನೋಕ್ತಿಗಳು 14 : 27 (KNV)
ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
ಙ್ಞಾನೋಕ್ತಿಗಳು 14 : 28 (KNV)
ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
ಙ್ಞಾನೋಕ್ತಿಗಳು 14 : 29 (KNV)
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
ಙ್ಞಾನೋಕ್ತಿಗಳು 14 : 30 (KNV)
ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
ಙ್ಞಾನೋಕ್ತಿಗಳು 14 : 31 (KNV)
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ಙ್ಞಾನೋಕ್ತಿಗಳು 14 : 32 (KNV)
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
ಙ್ಞಾನೋಕ್ತಿಗಳು 14 : 33 (KNV)
ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
ಙ್ಞಾನೋಕ್ತಿಗಳು 14 : 34 (KNV)
ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
ಙ್ಞಾನೋಕ್ತಿಗಳು 14 : 35 (KNV)
ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35

BG:

Opacity:

Color:


Size:


Font: