ಪ್ರಕಟನೆ 11 : 1 (OCVKN)
ಎರಡು ಸಾಕ್ಷಿಗಳು ದಂಡದಂತಿದ್ದ ಒಂದು ಅಳತೆ ಕೋಲು ನನಗೆ ಕೊಡಲಾಯಿತು. ನನಗೆ ಹೀಗೆ ಹೇಳಲಾಯಿತು: “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡಿ, ಆಲಯದಲ್ಲಿ ಆರಾಧನೆ ಮಾಡುವವರನ್ನು ಎಣಿಸು.
ಪ್ರಕಟನೆ 11 : 2 (OCVKN)
ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.
ಪ್ರಕಟನೆ 11 : 3 (OCVKN)
ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”
ಪ್ರಕಟನೆ 11 : 4 (OCVKN)
ಇವರು, “ಎಣ್ಣೆಯ ಮರಗಳೂ ಭೂಲೋಕದ ಒಡೆಯ ಆಗಿರುವವರ ಮುಂದೆ ನಿಂತಿರುವ ಎರಡು ದೀಪಸ್ತಂಭಗಳೂ ಆಗಿದ್ದಾರೆ.”[* ನೋಡಿರಿ ಜೆಕರ್ಯ 4:3,11, 14 ]
ಪ್ರಕಟನೆ 11 : 5 (OCVKN)
ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಇವರ ಬಾಯೊಳಗಿಂದ ಬೆಂಕಿ ಹೊರಟು, ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಅವನಿಗೂ ಅದೇ ರೀತಿಯಾಗಿ ಕೊಲೆಯಾಗಬೇಕು.
ಪ್ರಕಟನೆ 11 : 6 (OCVKN)
ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.
ಪ್ರಕಟನೆ 11 : 7 (OCVKN)
ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು.
ಪ್ರಕಟನೆ 11 : 8 (OCVKN)
ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಗಳು ಸಾಂಕೇತಿಕವಾಗಿ ಸೊದೋಮ್ ಹಾಗೂ ಈಜಿಪ್ಟ್ ಎಂದೂ ಹೆಸರುಗಳಿರುವುದು. ಇವರ ಒಡೆಯ ಆಗಿರುವವರನ್ನು ಸಹ ಅಲ್ಲಿಯೇ ಶಿಲುಬೆಗೆ ಹಾಕಲಾಗಿತ್ತು.
ಪ್ರಕಟನೆ 11 : 9 (OCVKN)
ಆಗ ಸಕಲ ಪ್ರಜೆ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು, ಇವರ ಶವಗಳನ್ನು ಸಮಾಧಿಯಲ್ಲಿಡಲು ಅನುಮತಿಸದೆ, ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು.
ಪ್ರಕಟನೆ 11 : 10 (OCVKN)
ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.
ಪ್ರಕಟನೆ 11 : 11 (OCVKN)
ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮವು† ಅಥವಾ ಜೀವಾತ್ಮವು (ನೋಡಿರಿ ಯೆಹೆ 37:5,14) ಬಂದು, ಆ ಶವಗಳಲ್ಲಿ ಪ್ರವೇಶಿಸಲು, ಅವು ಕಾಲೂರಿ ನಿಂತವು. ಅವರನ್ನು ಕಂಡವರಿಗೆ ಮಹಾ ಭಯವುಂಟಾಯಿತು.
ಪ್ರಕಟನೆ 11 : 12 (OCVKN)
ಆಗ ಅವರಿಗೆ, “ಇಲ್ಲಿ ಮೇಲಕ್ಕೆ ಬನ್ನಿರಿ,” ಎಂದು ಮಹಾಧ್ವನಿಯು ಕೇಳಿಸಿತು. ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
ಪ್ರಕಟನೆ 11 : 14 (OCVKN)
ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.
ಪ್ರಕಟನೆ 11 : 15 (OCVKN)
ಎರಡನೆಯ ವಿಪತ್ತು ಕಳೆದುಹೋಯಿತು. ಮೂರನೆಯ ವಿಪತ್ತು ಬೇಗನೆ ಬರಲಿದೆ. ಏಳನೆಯ ತುತೂರಿ ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”
ಪ್ರಕಟನೆ 11 : 16 (OCVKN)
16 ತರುವಾಯ ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ದೇವರಿಗೆ ಅಡ್ಡಬಿದ್ದು,
ಪ್ರಕಟನೆ 11 : 17 (OCVKN)
ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.
ಪ್ರಕಟನೆ 11 : 18 (OCVKN)
ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”
ಪ್ರಕಟನೆ 11 : 19 (OCVKN)
ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.
❮
❯
1
2
3
4
5
6
7
8
9
10
11
12
13
14
15
16
17
18
19