KNV
7. ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ERVKN
7. “ ‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
IRVKN
7. ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN